Kantara 2: ಕಾಂತರಾ ಚಾಪ್ಟರ್ 1 ಸಿನಿಮಾಗಾಗಿ ರಿಷಬ್ ಶೆಟ್ಟಿ ಏನೆಲ್ಲ ಪ್ಲಾನ್ ಮಾಡಿಕೊಂಡಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Kantara 2: ಕಾಂತಾರ ಸಿನಿಮಾ ಯಾವ ರೀತಿಯಲ್ಲಿ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಇರುವಂತಹ ಅಭಿಪ್ರಾಯಗಳನ್ನು ಬದಲಾಯಿಸಿದೆ ಎನ್ನುವುದನ್ನು ನಿಮಗೆ ವಿಶೇಷವಾಗಿ ವಿವರಿಸಿ ಹೇಳಬೇಕಾಗದ ಅಗತ್ಯವಿಲ್ಲ ಎಂಬುದಾಗಿ ಭಾವಿಸುತ್ತೇನೆ. ಸದ್ಯಕ್ಕೆ ಪ್ರತಿಯೊಬ್ಬರೂ ಕೂಡ ಕಾಂತಾರ ಸಿನಿಮಾದ ಎರಡನೇ ಅವತರಿಣಿಕೆ ಅಂದರೆ ಕಾಂತಾರ ಚಾಪ್ಟರ್ 1 ಸಿನಿಮಾದ ಬಗ್ಗೆ ತಿಳಿದುಕೊಳ್ಳಲು ಪ್ರತಿಯೊಬ್ಬರು ಕೂಡ ಕಾತರರಾಗಿದ್ದಾರೆ.
ಇನ್ನು ಇತ್ತೀಚಿಗಷ್ಟೇ ಅಮೆಜಾನ್ ಪ್ರೈಮ್ ಸಂಸ್ಥೆಯಿಂದ ಮುಂಬೈನಲ್ಲಿ ನಡೆದಿರುವಂತಹ ಕಾರ್ಯಕ್ರಮದಲ್ಲಿ ಇನ್ನೇನು ಚಿತ್ರೀಕರಣವನ್ನು ಪ್ರಾರಂಭ ಮಾಡಲಿರುವಂತಹ ಕಾಂತಾರ ಚಾಪ್ಟರ್ 1 ಸಿನಿಮಾದ ಬಗ್ಗೆ ರಿಷಬ್ ಶೆಟ್ಟಿ ಹೇಳಿಕೊಂಡಿದ್ದು ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುವಂತಹ ಪ್ರಯತ್ನವನ್ನು ಮಾಡೋಣ.

ಸಿನಿಮಾದ ಪ್ರೀಕ್ವೆಲ್ ಗೆ ಸಂಬಂಧಪಟ್ಟಂತೆ ಈಗಾಗಲೇ ಇದು ಪಂಜುರ್ಲಿ ಹಾಗೂ ಗುಳಿಗ ದೈವಗಳ ಕಥೆಗಳನ್ನು ಹೇಳುವಂತಹ ಸಿನಿಮಾ ಆಗಿರಲಿದೆ ಅನ್ನೋದಾಗಿ ತಿಳಿದು ಬಂದಿದ್ದು, ಇದರ ಬಗ್ಗೆ ಮಾತನಾಡುತ್ತಾ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ 1 ಸಿನಿಮಾಗಾಗಿ ನಾವು ನಮ್ಮ ಊರಿನಲ್ಲಿ ದೊಡ್ಡ ಸೆಟ್ ಹಾಕುತ್ತಿದ್ದೇವೆ ಹಾಗೂ ಏಪ್ರಿಲ್ ನಲ್ಲಿ ಚಿತ್ರೀಕರಣವನ್ನು ಪ್ರಾರಂಭ ಮಾಡುತ್ತಿದ್ದೇವೆ ಎನ್ನುವಂತಹ ಎಕ್ಸ್ಕ್ಲೂಸಿವ್ ಮಾಹಿತಿಯನ್ನು ಬಿಟ್ಟುಕೊಟ್ಟಿದ್ದಾರೆ.

ಸಿನಿಮಾದಲ್ಲಿ ಸಾಕಷ್ಟು ಪುರಾತನ ವಿಷಯಗಳನ್ನು ಕೆದುಕುವಂತಹ ಪ್ರಯತ್ನ ನಡೆಯಲಿದೆ ಹೀಗಾಗಿ ಚಿತ್ರತಂಡ ಪ್ರತಿಯೊಂದು ಮಾಹಿತಿಗಳನ್ನು ಕೂಡ ಸಂಗ್ರಹಿಸುವಂತಹ ಕೆಲಸವನ್ನು ಮಾಡಿದೆ ಎಂಬುದಾಗಿ ಸಿನಿಮಾ ಮೂಲಗಳಿಂದ ತಿಳಿದು ಬಂದಿದೆ. ಇದುವರೆಗೂ ಕೂಡ ರಿಷಬ್ ಶೆಟ್ಟಿ ಅವರನ್ನು ಹೊರತುಪಡಿಸಿ ಸಿನಿಮಾದಲ್ಲಿ ಯಾವ ಕಲಾವಿದರು ನಟಿಸುತ್ತಿದ್ದಾರೆ ಎನ್ನುವಂತಹ ಮಾಹಿತಿಗಳು ಕೂಡ ಲಭ್ಯವಾಗಿಲ್ಲ. ಅಷ್ಟರ ಮಟ್ಟಿಗೆ ಸಿನಿಮಾ ತಂಡ ಗೌಪ್ಯತೆಯನ್ನು ಕಾಪಾಡಿಕೊಂಡಿದೆ ಎನ್ನಬಹುದಾಗಿದೆ.

ಎಲ್ಲಾ ಬಿಟ್ಟು ಈಗ ಕೆಜಿಎಫ್ ಚಾಪ್ಟರ್ 3 ರೀತಿಯಲ್ಲಿ ಈ ಸಿನಿಮಾಗೆ ನಾಯಕ ನಟಿ ಯಾರು ಎನ್ನುವುದರ ಬಗ್ಗೆ ಕೂಡ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಊಹಾಪೋಹಗಳು ಹಾಗೂ ಚರ್ಚೆಗಳು ಮೂಡಲು ಪ್ರಾರಂಭವಾಗಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿರುವ ಗಾಳಿ ಸುದ್ದಿಗಳ ಪ್ರಕಾರ ಈ ಸಿನಿಮಾದಲ್ಲಿ ಆಲಿಯಾ ಭಟ್, ರುಕ್ಮಿಣಿ ವಸಂತ್, ಸಾಯಿ ಪಲ್ಲವಿ ಅವರಂತಹ ನಟಿಯರು ಕೂಡ ನಾಯಕಿಯಾಗಿ ಆಯ್ಕೆ ಆಗಬಹುದು ಎನ್ನುವ ರೀತಿಯಲ್ಲಿ ಚರ್ಚೆಗಳು ಪ್ರಾರಂಭವಾಗಿವೆ.

ಇತ್ತೀಚಿನ ದಿನಗಳಲ್ಲಿ ಬಂದಿರುವಂತಹ ಸುದ್ದಿಯ ಪ್ರಕಾರ ಸಿನಿಮಾದ ಲುಕ್ ಟೆಸ್ಟ್ ಗಾಗಿ ರುಕ್ಮಿಣಿ ವಸಂತ್ ರವರು ಕೂಡ ಆಯ್ಕೆಯಾಗಿದ್ದರು ಅನ್ನೋ ಸುದ್ದಿ ಕೇಳಿಬಂದಿತ್ತು. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಅಥವಾ ಸುಳ್ಳು ಅನ್ನೋದನ್ನ ಕಾಲವೇ ನಿರ್ಧರಿಸಬೇಕಾಗಿದೆ. ಸದ್ಯದ ಮಟ್ಟಿಗೆ ಯಾವುದೇ ರೀತಿಯ ಮಾಹಿತಿಯನ್ನು ಚಿತ್ರತಂಡ ಬಿಟ್ಟು ಕೊಟ್ಟಿಲ್ಲ ಹೀಗಾಗಿ ಮುಂದಿನ ದಿನಗಳಲ್ಲಿ ರಿಷಬ್ ಶೆಟ್ಟಿ ಅವರಿಂದಲೇ ನಾವು ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾಗಿದೆ.

Comments are closed.