Kannada News: ವಿಧಾನಸಭಾ ಎಲೆಕ್ಷನ್ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಸರ್ಕಾರವು ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಜನರು ಕೂಡ ತಮಗೆ ಅನುಕೂಲ ಆಗುತ್ತದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ, ಗೆಲ್ಲಿಸಿದ್ದಾರೆ. ಬಹುಮತ ಪಡೆದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟದ ರಚನೆ ಆಗಿದೆ.
ಜೂನ್ 1ರಂದು ನಡೆಯುವ ಮೊದಲ ಕ್ಯಾಬಿನೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಐದು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಇನ್ನು ಜಾರಿಗೆ ತಂದಿಲ್ಲ, ಅದಕ್ಕಿಂತ ಮೊದಲೇ ಆರನೇ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇದನ್ನು ಓದಿ..Kannada News: ಅಧಿಕಾರಕ್ಕೆ ಏರಿದ ತಕ್ಷಣ ಮತ್ತೊಂದು ಖಡಕ್ ಆದೇಶ ಕೊಟ್ಟ ಡಿಕೆಶಿ- ಪಕ್ಷಾತೀತವಾಗಿ ಬೆಂಬಲ ಕೊಟ್ಟ ಬಿಜೆಪಿ ಫ್ಯಾನ್ಸ್. ಏನು ಗೊತ್ತೇ?
“ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ತಗೆದುಕೊಳ್ಳಲಾಗುವುದು ಎಂದು ನಾನು ಆರನೇ ಗ್ಯಾರಂಟಿ ನೀಡಿದ್ದೆ. ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
KKRDB ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ 12 – 12 – 2022 ರಂದು ಹಿಂದಿನ ಸರ್ಕಾರಕ್ಕೆ ಪತ್ರ ಬರೆದು ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ 431 ಕೋಟಿ ಅವ್ಯವಹಾರದ ಬಗ್ಗೆ 1 – 6 -2022 ರಂದು ಪತ್ರ ಬರೆಯಲಾಗಿತ್ತು. ಇದನ್ನು ಓದಿ..Dk Shivakumar: ಮನೆಯಲ್ಲಿ ಅತ್ತೆ ಸೊಸೆ ಇಬ್ಬರೂ ಇದ್ದರೇ, ಕಾಂಗ್ರೆಸ್ ಯಾರಿಗೆ ದುಡ್ಡು ಕೊಡುತ್ತೆ?? ಎರಡು ಸಾವಿರ ಪಡೆಯುವರು ಯಾರು ಗೊತ್ತೇ? ಡಿಕೆಶಿ ಹೇಳಿದ್ದೇನು??
ನೂತನ ಸರ್ಕಾರ ಬಂದ ನಂತರ ಹಿಂದಿನ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರಗಳನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ನಂತರ ತಕ್ಷಣ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ. ಭ್ರಷ್ಟಾಚಾರದಲ್ಲಿ ಯಾರೇ ಮುಳುಗಿದ್ದರು ಸಹ ನಮ್ಮ ಕಾಂಗ್ರೆಸ್ ಸರ್ಕಾರವು ಕಾನೂನು ಕ್ರಮ ಕೈಗೊಳ್ಳಲಿದೆ..” ಎಂದು ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ.